22/08/2026
ಪಾಲಕ್ಕಾಡ್ ವಿಭಾಗದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಂಗಳೂರು ರೈಲ್ವೆ ಪ್ರದೇಶವನ್ನು ನೈಋತ್ಯ ರೈಲ್ವೆ ವಲಯದ (SWR) ಮೈಸೂರು ವಿಭಾಗಕ್ಕೆ ಸೇರಿಸಲು ಭಾರತೀಯ ರೈಲ್ವೆ ಇಲಾಖೆ ಮುಂದಾಗಿದೆ.
ಉಳ್ಳಾಲವರೆಗಿನ ಮಂಗಳೂರು ಪ್ರದೇಶವನ್ನು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದಿಂದ ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗಕ್ಕೆ ವರ್ಗಾಯಿಸಲು ನಿರ್ಧರಿಸಲಾಗಿದೆ. ನೈಋತ್ಯ ರೈಲ್ವೆ ವಲಯ ಮತ್ತು ದಕ್ಷಿಣ ರೈಲ್ವೆ ವಲಯದ ನಡುವಿನ ಇಂಟರ್ಚೇಂಜ್ ಪಾಯಿಂಟ್ಗಳು ಪಡೀಲ್ನಿಂದ ಉಳ್ಳಾಲಕ್ಕೆ ಬದಲಾಗುತ್ತವೆ ಎಂದು ರೈಲ್ವೆ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ತೋಕೂರು ನಿಲ್ದಾಣವು ಕೊಂಕಣ ರೈಲ್ವೆ (KRCL) ನ ಭಾಗವಾಗಿಯೇ ಉಳಿಯುತ್ತದೆ. ಕೊಂಕಣ ರೈಲ್ವೆ ಮತ್ತು ನೈಋತ್ಯ ರೈಲ್ವೆ ನಡುವಿನ ವಿನಿಮಯ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ. ಕೊಂಕಣ ರೈಲ್ವೆ ಮತ್ತು ದಕ್ಷಿಣ ವಲಯದ ನಡುವಿನ ವಿಭಾಗೀಯ/ ವಲಯ ಗಡಿಗಳು ಕೊಂಕಣ ರೈಲ್ವೆ ಮತ್ತು ನೈರುತ್ಯ ರೈಲ್ವೆ ನಡುವಿನ ವಿಭಾಗೀಯ/ವಲಯ ಗಡಿಗಳಾಗುತ್ತವೆ.